Sunday, May 18, 2025
Google search engine
Homeತಾಜಾ ಸುದ್ದಿಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ: ಜಮ್ಮು ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ: ಜಮ್ಮು ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ.

ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.

ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ದಾಳಿಯಲ್ಲಿ ಸ್ಥಳದಲ್ಲೇ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನ ರಕ್ಷಿಸಿ ಸ್ಥಳೀಯರು ಬೇರೆಡೆ ಕರೆದುಕೊಂಡು ಬಂದಿದ್ದಾರೆ.

ಹತ್ಯೆ ಘಟನೆ ಮಾಹಿತಿ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿ ನೇತೃತ್ವದಲ್ಲಿ ತಂಡವನ್ನು ಜಮ್ಮು ಕಾಶ್ಮೀರಕ್ಕೆ ತೆರಳುವಂತೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments