Sunday, September 8, 2024
Google search engine
Homeಅಪರಾಧಕೇರಳದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಟಿವಿ ನಿರೂಪಕಿ ದಿವ್ಯಾ ವಸಂತ!

ಕೇರಳದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಟಿವಿ ನಿರೂಪಕಿ ದಿವ್ಯಾ ವಸಂತ!

ಬ್ಲಾಕ್ ಮೇಲ್ ಮಾಡಿ ವೈದ್ಯರು ಹಾಗೂ ಸ್ಪಾ ಮಾಲೀಕರನ್ನು ಸುಲಿಗೆ ಮಾಡುತ್ತಿದ್ದ ಪ್ರಕರಣದಲ್ಲಿ ಟಿವಿ ನಿರೂಪಕಿ ದಿವ್ಯಾ ವಸಂತ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ ನ್ಯೂಸ್ ಸಿಇಒ ವೆಂಕಟೇಶ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ಹೊರಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಅವರನ್ನು ಕೇರಳದಲ್ಲಿ ಬಂಧಿಸಿದ್ದಾರೆ.

ತಮಿಳುನಾಡು, ಕೇರಳ ಸೇರಿದಂತೆ ನಾನಾ ಕಡೆ ಸಂಚರಿಸುತ್ತಾ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತಳನ್ನು ಜೀವನ್ ಭೀಮಾನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಇಂದಿರಾನಗರದ ಸ್ಪಾ ಮಾಲೀಕರಿಗೆ ಬೆದರಿಕೆ ಹಾಕಿದ್ದ ವೆಂಕಟೇಶ್ ಹಾಗೂ ಸಹಚರರು 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ 5 ಲಕ್ಷ ರೂ. ಕೂಡಲೇ ನೀಡಬೇಕು ಎಂದು ಬೆದರಿಕೆ ಹಾಕಿದ್ದರು.

ಪ್ರಕರಣದಲ್ಲಿ ದಿವ್ಯಾ ವಸಂತ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೇರಿದೆ. ದಿವ್ಯಾ ವಸಂತ ರಾಜ್ ನ್ಯೂಸ್ ನ ಮಾಜಿ ನಿರೂಪಕಿ ಆಗಿದ್ದು, ನಂತರ ಬಿಟಿವಿ ಯಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದು, 6 ತಿಂಗಳ ಹಿಂದೆಯಷ್ಟೇ ಕೆಲಸ ತೊರೆದಿದ್ದರು. ಇತ್ತೀಚೆಗಷ್ಟೇ ಕಲರ್ಸ್ ಕನ್ನಡದ ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments