Friday, May 17, 2024
Google search engine
Homeಅಪರಾಧರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್, ಬಾಂಬರ್ ಅರೆಸ್ಟ್!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್, ಬಾಂಬರ್ ಅರೆಸ್ಟ್!

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಎನ್ ಐಎ ಬಂಧಿಸಿದೆ.

ಬೆಂಗಳೂರಿನಲ್ಲಿ ಕೃತ್ಯ ಎಸಗಿ ತಲೆ ಮರೆಸಿಕೊಂಡಿದ್ದ ಮುಸಾವೀರ್ ಹುಸೇನ್ ಮತ್ತು ಅಬ್ದುಲ್ ಮತೀನ್ ಅವರನ್ನು ಬಂಧಿಸಲಾಗಿದೆ.

ಬಂಧಿತರು ಪಶ್ಚಿಮ ಬಂಗಾಳದ ಕೋಲ್ಕತಾದ ಪೂರ್ವ ಮಿಡ್ನಾಪುರ ದಿಘಾ ಗಡಿಯಿಂದ ವಿದೇಶಕ್ಕೆ ಹಾರಲು ಉದ್ದೇಶಿಸಿದ್ದರು ಎಂದು ತಿಳಿದು ಬಂದಿದ್ದು ದಿಘಾ ಗ್ರಾಮದ ಮನೆಯೊಂದರಲ್ಲಿ ಬಂಧಿಸಲಾಗಿದೆ.

ಯಾರಿಗೂ ಗುರುತು ಸಿಗದಂತೆ ತಲೆಮರೆಸಿಕೊಂಡಿದ್ದ ಇವರಿಬ್ಬರು ನಕಲಿ ದಾಖಲೆ ನೀಡಿ ಕೋಲ್ಕತ್ತಾದಲ್ಲಿ ವಾಸ್ತವ್ಯ ಹೂಡಿದ್ದರು. ಮನೆಯಲ್ಲಿ ವಾಸ್ತವ್ಯ ಮುನ್ನ ಚೀಪ್ ರೇಟ್ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಇದೀಗ ಖಚಿತ ಮಾಹಿತಿಯನ್ನಾಧರಿಸಿ ಎನ್‍ಐಎ ಟೀಂ ನಸುಕಿನ ಜಾವ 2.30 ರ ವೇಳೆಗೆ  ದಾಳಿ ನಡೆಸಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments