Monday, September 16, 2024
Google search engine
Homeತಾಜಾ ಸುದ್ದಿಕಾಂಗ್ರೆಸ್ ಗೆ ಬಂದ ಗತಿಯೇ ಬರುತ್ತೆ: ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ

ಕಾಂಗ್ರೆಸ್ ಗೆ ಬಂದ ಗತಿಯೇ ಬರುತ್ತೆ: ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ

ನಾವು ಅದೇ ತಪ್ಪು ಮಾಡಿದರೆ ಕಾಂಗ್ರೆಸ್ ಗೆ ಬಂದ ಗತಿಯೇ ನಮಗೂ ಬರುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಪಣಜಿಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ವಿಭಿನ್ನ ಪಕ್ಷ. ಹಾಗಾಗಿ ಜನರು ಪದೇಪದೆ ನಮ್ಮನ್ನು ಆಯ್ಕೆ ಮಾಡಿ ಗೆಲ್ಲಿಸುತ್ತಿದ್ದಾರೆ. ಆದರೆ ನಾವು ಕೂಡ ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ಮಾಡಿದರೆ ಆ ಪಕ್ಷದ ಸ್ಥಿತಿಯೇ ನಮಗೂ ಬರುತ್ತದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿರುವುದನ್ನು ಸೂಚ್ಯವಾಗಿ ತಿಳಿಸಿದ ಅವರು, ಅಡ್ವಾಣಿ ಅವರು ಪದೇಪದೆ ಹೇಳುತ್ತಿದ್ದರು. ನಮ್ಮದು ವಿಭಿನ್ನ ಪಕ್ಷ. ಹೇಗೆ ವಿಭಿನ್ನ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅದರಂತೆ ನಡೆದುಕೊಂಡರೆ ಮಾತ್ರ ಜನ ಬೆಂಬಲಿಸುತ್ತಾರೆ ಎಂದು ಅವರು ಹೇಳಿದರು.

ಜನರು ಕಾಂಗ್ರೆಸ್ ಪಕ್ಷ ಮಾಡಿದ ತಪ್ಪುಗಳು ಮತ್ತು ಅದು ಪುನರಾರ್ವತನೆ ಮಾಡಿದ್ದಕ್ಕಾಗಿ ಸೋಲಿಸಿದರು. ನಾವು ಕೂಡ ಅದೇ ತಪ್ಪನ್ನು ಪುನರಾವರ್ತಿಸುತ್ತಿದ್ದರೆ ಜನರು ನಮ್ಮನ್ನು ಆ ಪಕ್ಷ ಸೋಲಿಸಿದಂತೆ ಸೋಲಿಸುತ್ತಾರೆ. ಆದ್ದರಿಂದ ಕಾರ್ಯಕರ್ತರು ಪಕ್ಷದ ಭಿನ್ನತೆ ಅರ್ಥ ಮಾಡಿಕೊಂಡು ಸಾಮಾಜಿಕ ಮತ್ತು ಆರ್ಥಿಕ ಸಮಗ್ರ ಬದಲಾವಣೆಗೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments