Monday, September 23, 2024
Google search engine
Homeತಾಜಾ ಸುದ್ದಿviral news ರಸ್ತೆ ಗುಂಡಿಯಲ್ಲಿ ಸಿಕ್ಕಿಬಿದ್ದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು!

viral news ರಸ್ತೆ ಗುಂಡಿಯಲ್ಲಿ ಸಿಕ್ಕಿಬಿದ್ದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು!

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆ ಗುಂಡಿಯಲ್ಲಿ ಸಿಕ್ಕಿಬಿದ್ದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.

ರ್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಶಿವರಾಜ್ ಸಿಂಗ್ ಅವರ ಕಾರು ಭಾರೀ ಮಳೆಯಿಂದಾಗಿ ಬಹರಗೋರಾ ಪಟ್ಟಣದ ರಸ್ತೆಯಲ್ಲಿ ತುಂಬಿದ್ದ ರಸ್ತೆ ಗುಂಡಿಯಲ್ಲಿ ಸಿಕ್ಕಿಬಿದ್ದಿದೆ. ರಸ್ತೆ ಗುಂಡಿಯಲ್ಲಿ ಸಿಕ್ಕಿಬಿದ್ದ ಕಾರನ್ನು ಹೊರಗೆ ತೆಗೆಯಲು ಸಿಬ್ಬಂದಿ ಪರದಾಡಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಗೆ ಜಾರ್ಖಂಡ್ ಬಿಜೆಪಿ ಪಕ್ಷದ ಚುನಾವಣಾ ಉಸ್ತುವಾರಿ ಆಗಿ ನೇಮಕಗೊಂಡಿದ್ದು, ಚುನಾವಣಾ ಸಿದ್ದತೆ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಕ್ಕಾಗಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ರಸ್ತೆ ಗುಂಡಿಯಲ್ಲಿ ಅಡ್ಡಾದಿಡ್ಡಿಯಾಗಿ ಸಿಕ್ಕಿಬಿದ್ದಿದ್ದ ಕಾರು ನಿಂತಿದ್ದರಿಂದ ಕೆಲವು ಸಮಯದ ನಂತರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರಿನಿಂದ ಇಳಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments