Home ಕ್ರೀಡೆ 2 ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ವಿರಾಟ್ ಕೊಹ್ಲಿ!

2 ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ವಿರಾಟ್ ಕೊಹ್ಲಿ!

by Editor
0 comments
virat kohli

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 17ನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಈ ಮೂಲಕ ಎರಡು ಬಾರಿ ಆರೆಂಜ್ ಕ್ಯಾಪ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ಆರ್ ಸಿಬಿ ತಂಡದ ಅಮೋಘ ಪ್ರದರ್ಶನದಿಂದ ಪ್ಲೇಆಫ್ ಪ್ರವೇಶಿಸಿ ಅಚ್ಚರಿ ಮೂಡಿಸಿತ್ತು. ಪ್ಲೇಆಫ್ ನಲ್ಲಿ ಸೋಲುಂಡರೂ ತಂಡದ ಸಾಧನೆ ಹಿಂದೆ ಕೊಹ್ಲಿ ಅವರ ಪ್ರದರ್ಶನ ಗಮನ ಸೆಳೆಯಿತು. ಕೊಹ್ಲಿ 15 ಪಂದ್ಯಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 154.69ರ ಸರಾಸರಿಯಲ್ಲಿ 741 ರನ್ ಗಳಿಸಿದರು.

ಐಪಿಎಲ್ 2024ರಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ 35 ವರ್ಷದ ಕೊಹ್ಲಿ ಪಾಲಾಯಿತು. ಕೊಹ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆರೆಂಜ್ ಕ್ಯಾಪ್ ಪಡೆದ ಮೂರನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಅಲ್ಲದೇ ಎರಡು ಬಾರಿ ಆರೇಂಜ್ ಕ್ಯಾಪ್ ಗಳಿಸಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡರು.

ವಿಶೇಷ ಅಂದರೆ ಕೊಹ್ಲಿ 741 ರನ್ ಗಳಿಸಿದರೆ ಐಪಿಎಲ್ ನ ಯಾವುದೇ ಆಟಗಾರ 600ರ ಗಡಿ ಕೂಡ ದಾಟಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಋತುರಾಜ್ ಗಾಯಕ್ವಾಡ್ 14 ಪಂದ್ಯಗಳಿಂದ 583 ರನ್ ಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿ ಪಡೆದರು. ಅಂದರೆ ಕೊಹ್ಲಿ 158 ರನ್ ಗಳ ಮುನ್ನಡೆ ಪಡೆದು ಆರೆಂಜ್ ಕ್ಯಾಪ್ ಪಡೆದರು.

banner

ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅತೀ ಹೆಚ್ಚು 3 ಬಾರಿ (2015, 2017, 2019) ಆರೆಂಜ್ ಕ್ಯಾಪ್ ಪಡೆದಿದ್ದರೆ, ಆರ್ ಸಿಬಿ ತಂಡದಲ್ಲಿ ಆಡಿದ್ದ ಕ್ರಿಸ್ ಗೇಲ್ 2 ಬಾರಿ (2011, 2012) ಮತ್ತು ವಿರಾಟ್ ಕೊಹ್ಲಿ (2016, 2024) ಎರಡು ಬಾರಿ ಅತೀ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!