Home ಜಿಲ್ಲಾ ಸುದ್ದಿ ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಯದುವೀರ್ ಒಡೆಯರ್ ಅಸಮಾಧಾನ

ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಯದುವೀರ್ ಒಡೆಯರ್ ಅಸಮಾಧಾನ

by Editor
0 comments
yadhuveer wadyier

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿಯಮ ಬಾಹಿರವಾದುದು ಎಂದು ಬಿಜೆಪಿ ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರದ ರಚನೆ ಹಾಗೂ ಸಭೆ ರಾಜವಂಸ್ಥಸರ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಉಂಟು ಮಾಡಿದೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದರು.

ದೇವಸ್ಥಾನದ ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ. ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗೂ ಅಡ್ಡಿಯಾಗುತ್ತದೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.

ತಡೆಯಾಜ್ಞೆ ನಡುವೆಯೂ ಸಭೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆ ಆಗುತ್ತದೆ. ನ್ಯಾಯಾಂಗ ನಿಂದನೆಗೆ ಒಳಪಡುವ ಸಭೆಗೆ ನಾನು ಹೋಗುವುದಿಲ್ಲ. ಪ್ರಾಧಿಕಾರ ರಚನೆ ಸಂಬಂಧ ಸೆಪ್ಟೆಂಬರ್​​ 5ರವರೆಗೆ ತಡೆಯಾಜ್ಞೆ ಇರುವುದು ಸತ್ಯ. ಮುಖ್ಯಮಂತ್ರಿಗಳು ಹೇಗೆ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದರು ಗೊತ್ತಿಲ್ಲ ಎಂದು ಯದುವೀರ್ ಪ್ರತಿಕ್ರಿಯಿಸಿದರು.

banner

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂನ್​ 28 ರಂದು ಆದೇಶ ಹೊರಡಿಸಿತ್ತು.

ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು. ಪ್ರಮೋದಾದೇವಿ ಒಡೆಯರ್​ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್​ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್​ 5ಕ್ಕೆ ಮುಂದೂಡಿದೆ.

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ