Tuesday, May 26, 2026
Google search engine
Homeರಾಜ್ಯಕಾಳಸಂತೆಯಲ್ಲಿ ರೈತರಿಗೆ ರಸಗೊಬ್ಬರ ಮಾರುತ್ತಿದ್ದ 8 ಆಗ್ರೊ ಏಜೆನ್ಸಿಗಳ ಲೈಸೆನ್ಸ್ ರದ್ದು!

ಕಾಳಸಂತೆಯಲ್ಲಿ ರೈತರಿಗೆ ರಸಗೊಬ್ಬರ ಮಾರುತ್ತಿದ್ದ 8 ಆಗ್ರೊ ಏಜೆನ್ಸಿಗಳ ಲೈಸೆನ್ಸ್ ರದ್ದು!

ಕಲಬುರಗಿ: ರೈತರಿಗೆ ನಿಗದಿತ ಬೆಲೆಗಿಂತ ಅಧಿಕ ಮೊತ್ತಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದುಪಡಿಸಲಾಗಿದೆ.

“DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು.

ಅಧಿಕೃತ ಜಿಎಸ್​ಟಿ ಬಿಲ್​ ಕೊಡದೆ ನಕಲಿ ಬಿಲ್​ಗಳನ್ನು ರೈತರಿಗೆ ಕೊಟ್ಟು ಆಗ್ರೋ ಏಜೆನ್ಸಿಗಳು ಮೋಸ ಮಾಡುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ.

ರೈತರಿಗೆ ಯೋಗ್ಯ ಬೆಲೆಯಲ್ಲಿ ಗೊಬ್ಬರ, ಬೀಜ, ಮತ್ತು ಕ್ರಿಮಿನಾಶಕ ಸಿಗುವಂತಹ ವ್ಯವಸ್ಥೆ ಮಾಡಬೇಕು ಎಂದು ರೈತ ಸಂಘದ ಅಧ್ಯಕ್ಷ ಮಹಾಂತಗೌಡ ನಂದಿಹಳ್ಳಿ ಮನವಿ ಮಾಡಿದ್ದಾರೆ.

MRP ಗಿಂತ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ, ಬಿತ್ತನೆ ಬೀಜ ಹೆಚ್ಚುವರಿ ದರಕ್ಕೆ ಮಾರಾಟ ಹಾಗೂ ನಿಯಮಗಳನ್ನು ಉಲ್ಲಂಘಿಸಿರುವ ಆಗ್ರೋ ಏಜೆನ್ಸಿಗಳ ಲೈಸನ್ಸ್​ನ್ನು ಕೃಷಿ ಅಧಿಕಾರಿಗಳು ರದ್ದು ಪಡಿಸಿದ್ದಾರೆ.

“ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುವ ಬಗ್ಗೆ ಕ್ರಮ ವಹಿಸಿದ್ದೇವೆ. ಈಗಾಗಲೇ ನಾವು 8 ಏಜೆನ್ಸಿಗಳ ಮೇಲೆ ಕ್ರಮತೆಗೆದುಕೊಂಡಿದ್ದೇವೆ. ಇದಾಗಿಯೂ ಮುಂದೆ ಫರ್ಟಿಲೈಜರ್​ ಅಂಗಡಿಯಲ್ಲಿ ರೈತರಿಗೆ ವಂಚನೆ ಮಾಡುವುದು ಕಂಡುಬಂದರೆ ಮುಲಾಜಿಲ್ಲದೆ ಲೈಸನ್ಸ್​​ ರದ್ದು ಮಾಡುವುದಾಗಿ” ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments