Home ಅಪರಾಧ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ!

ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ!

12ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯ ಮುಖ್ಯೋಪಾಧ್ಯಯರನ್ನು ಶಾಲೆಯ ಶೌಚಾಲಯದಲ್ಲಿ ಗುಂಡಿಕ್ಕಿ ಕೊಲೆಗೈದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

by Editor
0 comments
student

12ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯ ಮುಖ್ಯೋಪಾಧ್ಯಯರನ್ನು ಶಾಲೆಯ ಶೌಚಾಲಯದಲ್ಲಿ ಗುಂಡಿಕ್ಕಿ ಕೊಲೆಗೈದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಛತ್ರಪುರ ಜಿಲ್ಲೆಯ ಧಾಮೋರ ಸರ್ಕಾರಿ ಸೆಕೆಂಡರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ 55 ವರ್ಷದ ಸುರೇಂದ್ರ ಕುಮಾರ್ ಸಕ್ಸೇನಾ ಹತ್ಯೆಯಾಗಿದ್ದು, ಶಾಲೆಯ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರಿಂದ ಅಲ್ಲಿಯೇ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮುಖ್ಯೋಪಾಧ್ಯಾಯರನ್ನು ಹಿಂಬಾಲಿಸಿದ ವಿದ್ಯಾರ್ಥಿ ಶೌಚಾಲಯಕ್ಕೆ ಹೋಗುತ್ತಿದ್ದಂತೆ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಒಂದು ಗುಂಡು ಅವರ ಹಣೆಗೆ ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುಂಡಿನ ಶಬ್ಧ ಕೇಳುತ್ತಿದ್ದಂತೆ ಶಾಲೆ ಸಿಬ್ಬಂದಿ ಮುಖ್ಯೋಪಾಧ್ಯಾಯರ ಕೊಠಡಿಗೆ ಧಾವಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕಂಡು ಗಾಬರಿಯಾಗಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಶಾಲೆಯ ಸಿಸಿಟಿವಿಯಲ್ಲಿ ಮುಖ್ಯೋಪಾಧ್ಯಾಯರನ್ನು ವಿದ್ಯಾರ್ಥಿ ಹಿಂಬಾಲಿಸಿದ ದೃಶ್ಯ ಪತ್ತೆಯಾಗಿದೆ.

banner

ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಅಕ್ರಮ ಚಟುವಟಿಕೆಗಳನ್ನು ಮಾಡುತ್ತಿದ್ದು, ಮುಖ್ಯೋಪಾಧ್ಯಾಯರು ಎಚ್ಚರಿಕೆ ನೀಡಿದ್ದರು. ಇದರಿಂದ ಸೇಡಿನ ಕ್ರಮವಾಗಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಪೊಲೀಸ್ ಸೂಪರಿಟೆಂಡೆಂಟ್ ಶಂಕಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ