Sunday, December 7, 2025
Google search engine
Homeದೇಶದೇಶದಲ್ಲಿ ಕೋವಿಡ್ ಅಬ್ಬರ, 7 ಮಂದಿ ಬಲಿ, 2700ಕ್ಕೇರಿದ ಸಕ್ರಿಯ ಪ್ರಕರಣ

ದೇಶದಲ್ಲಿ ಕೋವಿಡ್ ಅಬ್ಬರ, 7 ಮಂದಿ ಬಲಿ, 2700ಕ್ಕೇರಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.

ದೇಶದಲ್ಲಿ ಕಳೆದ ಒಂದು ವಾರದಲ್ಲಿ 1000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 270ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಕೇರಳದಲ್ಲಿ ಅತೀ ಹೆಚ್ಚು 1417 ಕೊರೊನಾ ಪ್ರಕರಣಗಳು ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ 424, ದೆಹಲಿಯಲ್ಲಿ 294 ಮತ್ತು ಗುಜರಾತ್ ನಲ್ಲಿ 223 ಸೋಂಕು ಪ್ರಕರಣಗಳು ದೃಢಪಟ್ಟಿವೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 148 ಕೊರೊನಾ ಸೋಂಕು ಪತ್ತೆಯಾಗಿದ್ದು, ಪಶ್ಚಿಮ ಬಂಗಳಾದಲ್ಲಿ 116 ಪ್ರಕರಣಗಳು ದೃಢಪಟ್ಟಿವೆ.

ರಾಜಸ್ಥಾನದಲ್ಲಿ 51, ಉತ್ತರ ಪ್ರದೇಶ 42, ಪುದುಚೇರಿ 25, ಹರಿಯಾಣ 20, ಆಂಧ್ರಪ್ರದೇಶ 16, ಮಧ್ಯಪ್ರದೇಶ 10, ಗೋವಾ ಏಳು, ಮತ್ತು ಒಡಿಶಾ, ಪಂಜಾಬ್ ಮತ್ತು ಜಮ್ಮು ಕಾಶ್ಮೀರದಲ್ಲಿ ತಲಾ ನಾಲ್ಕು ಪ್ರಕರಣಗಳು ವರದಿಯಾಗಿವೆ. ತೆಲಂಗಾಣ, ಅರುಣಾಚಲ ಪ್ರದೇಶ ಮತ್ತು ಚಂಡೀಗಢ ರಾಜ್ಯಗಳಲ್ಲಿ ತಲಾ ಮೂರು ಪ್ರಕರಣಗಳು ವರದಿಯಾಗಿದ್ದರೆ, ಮಿಜೋರಾಂ ಮತ್ತು ಅಸ್ಸಾಂನಲ್ಲಿ ಇದುವರೆಗೆ ತಲಾ ಇಬ್ಬರು ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕಳೆದ ಒಂದು ವಾರದಲ್ಲಿ ಕೊರೊನಾಗೆ 7 ಮಂದಿ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ 2, ದೆಹಲಿ ಮತ್ತು ಕರ್ನಾಟಕದಲ್ಲಿ 3 ಮಂದಿ ಅಸುನೀಗಿದ್ದಾರೆ. ಪಂಜಾಬ್ ಹೊರತುಪಡಿಸಿ ಉಳಿದೆಲ್ಲೆಡೆ ಕೊರೊನಾಗೆ ಬಲಿಯಾದವರು ವಯೋವೃದ್ಧರು ಎಂದು ಇಲಾಖೆ ವರದಿಯಲ್ಲ ವಿವರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments