Home ದೇಶ ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ.

by Editor
0 comments
shabarimale

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ.

ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಕೊಂಡಿದ್ದಾರೆ.

ಸಂಚಾರ ವ್ಯವಸ್ಥೆಯಲ್ಲೂ ಏರುಪೇರಾಗಿದ್ದರಿಂದ ಸಮಸ್ಯೆ ಅನುಭವಿಸುವಂತಾಗಿದೆ. ಇನ್ನು ಮುನ್ನೆಚ್ಚರಿಕೆ ದೃಷ್ಟಿಯಿಂದ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ.

banner

ಶಬರಿಮಲೆ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಅಳುತಕ್ಕಡವುನಿಂದ ಪಂಪಾವರೆಗಿನ ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಚಾರಣ ನಿಷೇಧಿಸಲಾಗಿದೆ.

ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದ್ದು, ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ.

ಪಂಪಾ ಸ್ನಾನ ನಿಷೇಧ

ತೀವ್ರ ಮಳೆಯಿಂದಾಗಿ ಪಂಪಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಯಾತ್ರಿಕರು ನದಿಗೆ ಇಳಿಯುವುದನ್ನು ಹಾಗೂ ಸ್ನಾನಘಟ್ಟಕ್ಕೆ ತೆರಳುವುದನ್ನು ಜಿಲ್ಲಾಧಿಕಾರಿ ಎಸ್.ಪ್ರೇಮ್ ಕೃಷ್ಣನ್ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.

ಶಬರಿಮಲೆ ಪರಿಸರದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿದೆ. ತಕ್ಷಣದ ಯಾವುದೇ ಅಪಾಯ ಇಲ್ಲವಾಗಿದ್ದರೂ, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಅಪಾಯ ಸಾಧ್ಯತೆಗಳನ್ನು ಪರಿಗಣಿಸಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಎರುಮೇಲಿಯಲ್ಲಿ ಮಣ್ಣು ಕುಸಿದು ಬಿದ್ದಿದ್ದ ಪ್ರದೇಶವನ್ನು ತೆರವುಗೊಳಿಸಲಾಗಿದ್ದು, ಮತ್ತೆ ಸಂಚಾರ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಲ್ಲಿ ವ್ಯಾಪಕ ಹಾನಿ: ಈ ಮಧ್ಯೆ ಫೆಂಗಲ್ ಚಂಡಮಾರುತ್ ರೌದ್ರಕ್ಕೆ ತಮಿಳುನಾಡು ತತ್ತರಿಸಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ ವಿಲ್ಲುಪುರಂ ಜಿಲ್ಲೆಯಲ್ಲಿ ಕನಿಷ್ಟ ಏಳು ಮಂದಿ ಮಳೆ, ಭೂಕುಸಿತಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.

ಚಂಡಮಾರುತದ ಕಾರಣ ನೆರೆಯ ಪುದುಚೆರಿಯಲ್ಲಿ ಒಂದೇ ದಿನ ೫೦೦ಮಿಮಿಯಷ್ಟು ದಾಖಲೆಯ ಮಳೆ ಸುರಿದು ಕೇಂದ್ರಾಡಳಿತ ಪ್ರದಶವು ದೊಡ್ಡ ಕೆರೆಯಂತಾಗಿದ್ದು, ಪರಿಹಾರ ಕಾರು ತ್ವರಿತಗತಿಯಲ್ಲಿ ನಡೆಯುತ್ತಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!