Thursday, December 25, 2025
Google search engine
Homeದೇಶಮಗಳನ್ನೇ ಬಿಆರ್ ಎಸ್ ಪಕ್ಷದಿಂದ ಅಮಾನತುಗೊಳಿಸಿದ ತಂದೆ ಕೆಸಿಆರ್

ಮಗಳನ್ನೇ ಬಿಆರ್ ಎಸ್ ಪಕ್ಷದಿಂದ ಅಮಾನತುಗೊಳಿಸಿದ ತಂದೆ ಕೆಸಿಆರ್

ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ.

ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಸ್ವತಃ ಪಕ್ಷ ವಿರೋಧಿ ಹೇಳಿಕೆ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅಮಾತನುಗೊಳಿಸಿದ್ದಾರೆ.

ಕೆ. ಕವಿತಾ ಇತ್ತೀಚೆಗೆ ತಮ್ಮದೇ ಪಕ್ಷದ ಮುಖಂಡರು ಹಾಗೂ ಮಾಜಿ ನೀರಾವರಿ ಸಚಿವರಾದ ಹರೀಶ್ ರಾವ್ ಹಾಗೂ ರಾಜ್ಯಸಭಾ ಸದಸ್ಯ ಜೆ. ಸಂತೋಷ್ ಕುಮಾರ್ ವಿರುದ್ಧ ಹೇಳಿಕೆ ನೀಡಿದ್ದರು. ಇದರಿಂದ ಆಡಳಿತಾರೂಢ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ವರವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments