Monday, September 16, 2024
Google search engine
Homeಅಪರಾಧಹರಿಯಾಣದ ನಕ್ಸಲೇಟ್ ಬೆಂಗಳೂರಿನಲ್ಲಿ ಅರೆಸ್ಟ್!

ಹರಿಯಾಣದ ನಕ್ಸಲೇಟ್ ಬೆಂಗಳೂರಿನಲ್ಲಿ ಅರೆಸ್ಟ್!

ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣ ಮೂಲದ ನಕ್ಸಲೇಟ್ ನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ನಿಷೇಧಿತ ಸಿಪಿಐ(ಎಂ) ಸಂಘಟನೆಗೆ ಸೇರಿದ್ದ ಹರಿಯಾಣ ಮೂಲದ ಅನಿರುದ್ದ್ ರಾಜನ್ ಬಂಧಿತ ನಕ್ಸಲ್.

ನಿಷೇಧಿತ ಬರಹಗಳನ್ನ ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುತ್ತಿದ್ದ ಅನಿರುದ್ಧ್ ಗಾಗಿ ಪೊಲೀಸರು​ ಮತ್ತು ನಕ್ಸಲ್ ನಿಗ್ರಹ ತಂಡ ಬಲೆ ಬೀಸಿತ್ತು. ಬೆಂಗಳೂರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅನಿರುದ್ಧ್ ನನ್ನು ಬಂಧಿಸಲಾಗಿದೆ.

ಅನಿರುದ್ದ್ ರಾಜನ್ ಗೆಳತಿಯನ್ನು ನೋಡಲು 3-4 ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದು, ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ಆತನ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಅನಿರುದ್ದ್ ರಾಜನ್ ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸಿರುವುದು ತನಿಖೆ ವೇಳೆ ದೃಢಪಟ್ಟಿದ್ದು, ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಹೊಂದಿದ್ದ. ಈತನ ಬಳಿಯಿದ್ದ 2 ಬ್ಯಾಗ್​, ಪೆನ್​ಡ್ರೈವ್​ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ.

ಅನಿರುದ್ಧ್ ರಾಜನ್​ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಹರಿಯಾಣ ಮೂಲದ ಅನಿರುದ್ದ ರಾಜನ್​ ಖಾಸಗಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದ. ನಿಷೇಧಿತ ಎಡಪಂಥಿಯ ಸಂಘಟನೆಯ ಸಂಪರ್ಕ ಹೊಂದಿದ್ದ ಈತನನ್ನು 15 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದೇವೆ.‌ ಸದ್ಯ ಆತನ ಕಾರ್ಯ ಚಟುವಟಿಕೆ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments