ದೇಶದ ಗಡಿ ಕಾಯುವ ಯೋಧರ ಕುಟುಂಬಗಳಿಗೆ ಕಾನೂನು ನೆರವು ನೀಡುವ ಮಹತ್ವಾಕಾಂಕ್ಷಿ ವೀರ್ ಪರಿವಾರ್ ಸಹಾಯತ ಯೋಜನೆ 2025 ಘೋಷಿಸಲಾಗಿದೆ.
ಗಡಿಯಲ್ಲಿ ನೀವು ದೇಶಕ್ಕಾಗಿ ನೀವು ಸೇವೆ ಸಲ್ಲಿಸುತ್ತೀರಿ. ನಾವು ನಿಮ್ಮ ಕುಟುಂಬ ಜವಾಬ್ದಾರಿ ನಾವು ಹೊರುತ್ತೇವೆ ಎಂಬ ಘೋಷವಾಕ್ಯದೊಂದಿಗೆ ವೀರ್ ಪರಿವಾರ್ ಸಹಾಯತ ಯೋಜನೆ 2025 ಯೋಜನೆ ಪ್ರಕಟಿಸಲಾಗಿದೆ.
ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಶನಿವಾರ ನಡೆದ ಸಮ್ಮೇಳನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ಮುಂದಿನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸ್ಥಾನ ಅಲಂಕರಿಸಲಿರುವ ಸೂರ್ಯ ಕಾಂತ್ ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾಗವಹಿಸಿದ್ದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಂತರ ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಗಡಿಯಲ್ಲಿ ದೇಶ ಕಾಯುವ ಯೋಧರ ಕುಟುಂಬಗಳಿಗೆ ನೆರವು ನೀಡುವ ಯೋಜನೆ ಇದಾಗಿದೆ. ಗಡಿಯಲ್ಲಿ ಯೋಧರು ಕರ್ತವ್ಯ ನಿರತರಾಗಿದ್ದಾಗ ಅವರ ಕುಟುಂಬಗಳು ಎದುರಿಸುವ ಕಾನೂನಾತ್ಮಕ ಸಮಸ್ಯೆ ಹಾಗೂ ಕಾನೂನು ಹೋರಾಟಗಳ ಸಂಕಷ್ಟಗಳನ್ನು ಎದುರಿಸಲು ಕಾನೂನು ನೆರವು ನೀಡುವ ಯೋಜನೆ ಇದಾಗಿದೆ.
ನವೆಂಬರ್ 24 ರಂದು ಈ ಯೋಜನೆ ಅಧಿಕೃತವಾಗಿ ಪ್ರಾರಂಭಗೊಳ್ಳಲಿದ್ಉದ, ಹೊಸ ಯೋಜನೆಯನ್ನು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ: ಪ್ರತ್ಯೇಕ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಸಾಮಾನ್ಯವಾಗಿ ಕುಟುಂಬದ ಆಸ್ತಿ, ದೇಶೀಯ ವಿವಾದಗಳು ಅಥವಾ ಭೂ ವಿಷಯಗಳಿಗೆ ಸಂಬಂಧಿಸಿದ ಕಾನೂನು ಪ್ರಕರಣಗಳನ್ನು ಅನುಸರಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ.
ಕಾನೂನು ಹೋರಾಟದ ಸಂದರ್ಭದಲ್ಲಿ ಯೋಧರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಯುದ್ಧದಂತಹ ಪರಿಸ್ಥಿತಿ ಇದ್ದಾಗ ರಜೆಗಳು ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮ ಇದಾಗಿದೆ.
ಗಡಿ ಭದ್ರತಾ ಪಡೆ (ಬಿಎಸ್ಎಫ್), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಮತ್ತು ಇದೇ ರೀತಿಯ ಪ್ರತ್ಯೇಕ ಮತ್ತು ಹೆಚ್ಚಿನ ಅಪಾಯದ ಪರಿಸ್ಥಿತಿಗಳಲ್ಲಿ ಸೇವೆ ಸಲ್ಲಿಸುವ ಇತರರು ಸೇರಿದಂತೆ ಅರೆಸೈನಿಕ ಸಿಬ್ಬಂದಿಗೂ ಈ ಬೆಂಬಲ ವಿಸ್ತರಿಸಲಿದೆ.


