Home ರಾಜಕೀಯ ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್

ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್

ಬೆಂಗಳೂರು: ಶೋಕಾಸ್ ನೋಟಿಸ್‍ಗೆ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗ್ರವಾಲ್ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.

by Editor
0 comments
bjp NEWS

ಬೆಂಗಳೂರು: ಶೋಕಾಸ್ ನೋಟಿಸ್‍ಗೆ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗ್ರವಾಲ್ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವರ್ಸಸ್ ವಿಜಯೇಂದ್ರ ಅಥವಾ ಯತ್ನಾಳ್ ವರ್ಸಸ್ ಬಿಜೆಪಿ ಎಂಬುದು ಕರ್ನಾಟಕದಲ್ಲಿ ಇಲ್ಲ ಎಂದು ತಿಳಿಸಿದರು.

ಯತ್ನಾಳರಿಗೆ ಒಂದು ಶೋಕಾಸ್ ನೋಟಿಸ್ ಕೊಟ್ಟಿದ್ದು, ಅವರ ಉತ್ತರ ನಿರೀಕ್ಷೆಯಲ್ಲಿದ್ದೇವೆ ಎಂದು ಪತ್ರಕರ್ತರು ಪದೇಪದೇ ಪ್ರಶ್ನಿಸಿದಾಗ ಇದೇ ಉತ್ತರ ನೀಡಿದರು. ಯತ್ನಾಳ್ ಉತ್ತರ ಬಂದ ಬಳಿಕ ಮುಂದಿನ ಕ್ರಮದ ಕುರಿತು ಪಕ್ಷ ನಿರ್ಧರಿಸುತ್ತದೆ ಎಂದು ನುಡಿದರು.

ನಾನು ಬಿಜೆಪಿಯ ಬದ್ಧತೆಯುಳ್ಳ ಕಾರ್ಯಕರ್ತ. ಕರ್ನಾಟಕದಲ್ಲಿ ನಮ್ಮ 71 ಲಕ್ಷ ಕಾರ್ಯಕರ್ತರಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಅವರದೇ ಆದ ವ್ಯಕ್ತಿತ್ವ ಇರುತ್ತದೆ. ಅವರ ವ್ಯಕ್ತಿತ್ವ ಸರಿಯೇ ಅಥವಾ ತಪ್ಪೇ ಎಂಬುದಕ್ಕೆ ಸಮಯವೇ ಉತ್ತರ ಕೊಡಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

banner

ಪಕ್ಷದ ನಾಯಕತ್ವ ಬದಲಾವಣೆಯ ಅಧಿಕಾರ ತಳಮಟ್ಟದ ಕಾರ್ಯಕರ್ತರ ಅಥವಾ ರಾಷ್ಟ್ರೀಯ ನಾಯಕರ ಬಳಿ ಇದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!