Saturday, July 6, 2024
Google search engine
Homeರಾಜಕೀಯಶೆಟ್ಟರ್ ಸಂಧಾನ ಯಶಸ್ವಿ: ಬೆಳಗಾವಿಯಿಂದ ಸ್ಪರ್ಧೆಗೆ ಒಪ್ಪಿಗೆ

ಶೆಟ್ಟರ್ ಸಂಧಾನ ಯಶಸ್ವಿ: ಬೆಳಗಾವಿಯಿಂದ ಸ್ಪರ್ಧೆಗೆ ಒಪ್ಪಿಗೆ

ಬೆಳಗಾವಿಯಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜೀ ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಧಾರವಾಡ ಮತ್ತು ಹಾವೇರಿಯಿಂದ ಟಿಕೆಟ್ ಬಯಸಿದ್ದ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿಲಿಲ್ಲ. ಇದೇ ವೇಳೆ ಶೆಟ್ಟರ್ ಬೆಳಗಾವಿ ತಮಗೆ ಪರಿಚಿತವಿಲ್ಲದ ಕ್ಷೇತ್ರ ಎಂಬ ಕಾರಣಕ್ಕೆ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ಬಿಜೆಪಿ ಟಿಕೆಟ್ ಘೋಷಿಸಿರಲಿಲ್ಲ.

ಬುಧವಾರ ಬೆಂಗಳೂರಿನಲ್ಲಿ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸುದೀರ್ಘ ಮಾತುಕತೆ ವೇಳೆ ಯಡಿಯೂರಪ್ಪ ಅವರು, ಶೆಟ್ಟರ್ ಅವರನ್ನು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments