ಪಾಟ್ನಾ: ರಾಜಕೀಯ ತಂತ್ರಗಾರಿಕೆ ನಿಪುಣ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಭದ್ರಕೋಟೆಯನ್ನು ಭೇದಿಸಿದ್ದಾರೆ.
30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಅವರನ್ನು 19,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಪಕ್ಷದ ಬೃಹತ್ ಪ್ರತಿಭಟನೆ ಪ್ರಭಾವ ಈ ಕ್ಷೇತ್ರದಲ್ಲಿ ಪರಿಣಾಮ ಬೀರಿದ್ದು, ಯುವ ಮತದಾರರು ಬಿಜೆಪಿ ವಿರುದ್ಧದ ಆಕ್ರೋಶ ಈ ಚುನಾವಣೆಯಲ್ಲಿ ಹೊರಹಾಕಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.



