ಆರ್ ಸಿಬಿ ಐಪಿಎಲ್ ಚಾಂಪಿಯನ್ ಆದ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆರ್ ಸಿಬಿ ಅಭಿಮಾನಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಆರ್ ಸಿಬಿ ವಿಜಯೋತ್ಸವ ಆಚರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಮೃತಪಟ್ಟ ಯುವಕ. ಅಹಮದಾಬಾದ್ನಲ್ಲಿ ಐಪಿಎಲ್ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಂಡ ಸಂಭ್ರಮ ಮುಗಿಲು ಮುಟ್ಟಿತ್ತು.
ಇದೇ ಸಂಭ್ರಮದೊಂದಿಗೆ ಅಭಿಮಾನಿಗಳು ವಿಜಯೋತ್ಸವ ಮಾಡುತ್ತ ಮಂಜುನಾಥ್ ಟ್ರ್ಯಾಕ್ಟರ್ನಲ್ಲಿ ಹಾಡು ಹಾಕಿ ಕುಣಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮಂಜುನಾಥ್ ಅಸು ನೀಗಿದ್ದಾರೆ.



