Home ಕ್ರೀಡೆ 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ

2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಡ್ ಹೆಡ್ ಶತಕ ಹಾಗೂ ಮಧ್ಯಮ ವೇಗಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

by Editor
0 comments
patt cummins

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಡ್ ಹೆಡ್ ಶತಕ ಹಾಗೂ ಮಧ್ಯಮ ವೇಗಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಅಡಿಲೇಡ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವನ್ನು 2ನೇ ಇನಿಂಗ್ಸ್ ನಲ್ಲಿ 175 ರನ್ ಗಳಿಗೆ ಕಟ್ಟಿಹಾಕಿದ ಆಸ್ಟ್ರೇಲಿಯಾ ತಂಡ ಗೆಲ್ಲಲು ಬೇಕಿದ್ದ 19 ರನ್ ಸುಲಭ ಗುರಿಯನ್ನು ಯಾವುದೇ ವಿಕೆಟ್ ಕಳೆದುಕೊಳ್ಳದೇ ಗೆಲುವು ದಾಖಲಿಸಿತು.

ಈ ಗೆಲುವಿನೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 1-1ರಿಂದ ಸಮಬಲ ಸಾಧಿಸಿತು. ಅಲ್ಲದೇ ಪಿಂಕ್ ಚೆಂಡಿನ ಟೆಸ್ಟ್ ನಲ್ಲಿ ಆಡಿದ 13 ಪಂದ್ಯಗಳಲ್ಲಿ 12ರಲ್ಲಿ ಗೆಲುವಿನ ದಾಖಲೆ ಬರೆಯಿತು.

5 ವಿಕೆಟ್ ಗೆ 128 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ ಭಾರತ ತಂಡ 175 ರನ್ ಗೆ ಆಲೌಟಾಯಿತು. ನಿತೀಶ್ ಕುಮಾರ್ ರೆಡ್ಡಿ (42) ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಆಸೀಸ್ ವೇಗದ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು.

banner

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ 5 ವಿಕೆಟ್ ಪಡೆದು ಫಾರ್ಮ್ ಗೆ ಮರಳಿದರೆ, ಸ್ಕಾಟ್ ಬೋಲೆಂಡ್ 3 ಮತ್ತು ಮಿಚೆಲ್ ಸ್ಟಾರ್ಕ್ 2 ವಿಕೆಟ್ ಗಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ