Home ಕ್ರೀಡೆ ನಾಳೆಯಿಂದ 2ನೇ ಟೆಸ್ಟ್: ತಂಡಕ್ಕಾಗಿ ಆರಂಭಿಕ ಸ್ಥಾನ ತ್ಯಾಗ ಮಾಡಿದ ರೋಹಿತ್ ಶರ್ಮ

ನಾಳೆಯಿಂದ 2ನೇ ಟೆಸ್ಟ್: ತಂಡಕ್ಕಾಗಿ ಆರಂಭಿಕ ಸ್ಥಾನ ತ್ಯಾಗ ಮಾಡಿದ ರೋಹಿತ್ ಶರ್ಮ

ಭಾರತ ತಂಡದ ನಾಯಕ ಶುಕ್ರವಾರ ಆರಂಭಗೊಳ್ಳಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ತಂಡದ ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಅಗ್ರ ಕ್ರಮಾಂಕ ಬಿಟ್ಟುಕೊಡಲು ನಿರ್ಧರಿಸಿದ್ದಾರೆ.

by Editor
0 comments
rohit sharma

ಭಾರತ ತಂಡದ ನಾಯಕ ಶುಕ್ರವಾರ ಆರಂಭಗೊಳ್ಳಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ತಂಡದ ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಅಗ್ರ ಕ್ರಮಾಂಕ ಬಿಟ್ಟುಕೊಡಲು ನಿರ್ಧರಿಸಿದ್ದಾರೆ.

ಅಡಿಲೇಡ್ ನಲ್ಲಿ ಡಿಸೆಂಬರ್ 6ರಿಂದ ನಡೆಯಲಿರುವ ಪಿಂಕ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿದ್ದಾರೆ.

ರೋಹಿತ್ ಶರ್ಮ ಅನುಪಸ್ಥಿತಿಯಲ್ಲಿ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಗೆಲುವಿಗೆ ಪ್ರಮುಖ ಕಾರಣವಾಗಿದ್ದೇ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್. ಇವರಿಬ್ಬರ ಜೊತೆಯಾಟದಿಂದ ಭಾರತ ಎರಡನೇ ಇನಿಂಗ್ಸ್ ನಲ್ಲಿ ಮೇಲುಗೈ ಸಾಧಿಸಿದ್ದೂ ಅಲ್ಲದೇ 295 ರನ್ ಗಳ ಭಾರೀ ಅಂತರದಿಂದ ಗೆದ್ದು ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿತ್ತು.

ವೈಯಕ್ತಿಕ ಕಾರಣದಿಂದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮ, ಅಭ್ಯಾಸ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುವ ಪ್ರಯೋಗ ನಡೆಸಿ ವಿಫಲರಾಗಿದ್ದರು. ಆದರೂ ಅವರು ತಮ್ಮ ನೆಚ್ಚಿನ ಅಗ್ರ ಕ್ರಮಾಂಕದಲ್ಲಿ ಆಡದೇ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

banner

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮ, ಆರಂಭಿಕನಾಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ನಾನು ಮಧ್ಯಮ ಕ್ರಮಾಂಕದಲ್ಲಿ ಯಾವುದಾದರೂ ಸ್ಥಾನದಲ್ಲಿ ಆಡುವೆ. ಇದು ನನ್ನ ಪಾಲಿಗೆ ತುಂಬಾ ಕಷ್ಟ. ಆದರೆ ತಂಡದ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ