Home ಕ್ರೀಡೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ

ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ

by Editor
0 comments
india u19 team

ಆರಂಭಿಕ ವೈಭವ್ ಸೂರ್ಯವಂಶಿ ಅರ್ಧಶತಕ ಹಾಗೂ ಬೌಲರ್ ಗಳ ಸಹಾಯದಿಂದ ಭಾರತ ತಂಡ ೭ ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ.

ಶಾರ್ಜಾದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವನ್ನು 46.2 ಓವರ್ ಗಳಲ್ಲಿ 173 ರನ್ ಗೆ ಆಲೌಟ್ ಮಾಡಿದ ಭಾರತ ತಂಡ 21.4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಫೈನಲ್ ನಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ ಎದುರಿಸಲಿದೆ.

ಭಾರತ ತಂಡಕ್ಕೆ 13 ವರ್ಷದ ವೈಭವ್ ಸೂರ್ಯವಂಶಿ ಮತ್ತು ಆಯುಷ್ ಮಾತ್ರೆ ಮೊದಲ ವಿಕೆಟ್ ಗೆ 91 ರನ್ ಜೊತೆಯಾಟದ ಮೂಲಕ ಗೆಲುವಿನ ಭರವಸೆ ಮೂಡಿಸಿದರು. ಸೂರ್ಯವಂಶಿ 36 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 67 ರನ್ ಸಿಡಿಸಿದರೆ , ಆಯುಷ್ 28ಎಸೆತಗಳಲ್ಲಿ 7 ಬೌಂಡರಿ ಒಳಗೊಂಡ 34 ರನ್ ಗಳಿಸಿದರು.

ನಂತರ ಆಂಡ್ರೆ ಸಿದ್ಧಾರ್ಥ್ (22) ಮತ್ತು ನಾಯಕ ಮೊಹಮದ್ ಸಿರಾಜ್ (ಅಜೇಯ 25) ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಭಾರತೀಯ ಬೌಲರ್ ಗಳ ನಿಖರ ದಾಳಿಗೆ ತತ್ತರಿಸಿ ಸಾಧಾರಣ ಮೊತ್ತಕ್ಕೆ ಔಟಾಯಿತು. ಭಾರತದ ಪರ ಚೇತನ್ ಶರ್ಮ (3), ಕಿರಣ್ ಕೊರ್ಮಲೆ ಮತ್ತು ಆಯುಷ್ ಮಾತ್ರೆ ತಲಾ 2 ವಿಕೆಟ್ ಗಳಿಸಿದರು.

banner

ಶ್ರೀಲಂಕಾ ಒಂದು ಹಂತದಲ್ಲಿ 8 ರನ್ ಗೆ 3 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು. ಈ ಹಂತದಲ್ಲಿ ಲಕ್ವಿನ್ ಅಭಯಸಿಂಘೆ (67) ಮತ್ತು ಶಾರ್ಜುನ್ (42) ನಾಲ್ಕನೇ ವಿಕೆಟ್ ಗೆ 94 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಕಳಪೆ ಮೊತ್ತಕ್ಕೆ ಔಟಾಗುವ ಭೀತಿಯಿಂದ ಪಾರು ಮಾಡಿದರು

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!