ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೌಲ್ವಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನು ಬಂಧಿಸಲಾಗಿದೆ.
ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ.



