Kannadavahini

ಬಾರಿಸು ಕನ್ನಡ ಡಿಂಡಿಮವ

latest news

ಕೇಂದ್ರದಿಂದ ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಸಚಿವ ಶಿವಾನಂದ ಎಸ್. ಪಾಟೀಲ

ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ…

ಉತ್ತರಾಖಂಡ ಹಿಮಪಾತದಲ್ಲಿ 4 ಮಂದಿ ಸಾವು; 5 ಮಂದಿ ನಾಪತ್ತೆ!

ಉತ್ತರಾಖಂಡ್ ನ ಚಿಮೊಲಿಯಲ್ಲಿ ಶುಕ್ರವಾರ ಬಿದ್ದ ಹಿಮಪಾತದಲ್ಲಿ 4 ಮಂದಿ ಮೃತಪಟ್ಟಿದ್ದು, 5 ಮಂದಿ ಇನ್ನೂ ನಾಪತ್ತೆಯಾಗಿದ್ದರೆ. ಭಾರತ ಮತ್ತು ನೇಪಾಳ ಗಡಿ ಭಾಗದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಹಿಮಪಾತ ಆಗಿದ್ದರಿಂದ 48 ಮಂದಿ ಸಿಲುಕಿದ್ದರು. ರಕ್ಷಣಾ ಪಡೆಗಳು 39 ಮಂದಿಯನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯಲ್ಲಿ ರಕ್ಷಿಸಿದ್ದಾರೆ. ಮಾನಾದ ಇಂಡೋ-ಟಿಬೆಟ್…

ಚಾಮರಾಜಪೇಟೆ ಅಪಘಾತದಲ್ಲಿ ಮೃತಪಟ್ಟವರು ಮೈಸೂರಿನ ಕಾಲೇಜು ವಿದ್ಯಾರ್ಥಿಗಳು!

ಚಾಮರಾಜಪೇಟೆಯ ಕೊಳ್ಳೆಗಾಲದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾಬಿ.ಟಿ. ಕವಿತಾ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದದ 5 ಮಂದಿ ಅಸುನೀಗಿದ್ದಾರೆ ಎಂದರು. ಟಿಪ್ಪರ್…

ಟಿಪ್ಪರ್-ಕಾರು ಡಿಕ್ಕಿ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 5 ಮಂದಿ ದುರ್ಮರಣ

ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ೫ ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಮಂಡ್ಯ ಮೂಲದ೫ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾದಪ್ಪನ…

16 ವರ್ಷ ನಂತರ ಚಾಂಪಿಯನ್ಸ್ ಟ್ರೋಫಿ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ

ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ. ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು. ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 50 ಓವರ್…

ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋ ಬಟ್ಲರ್: ದ.ಆಫ್ರಿಕಾ ವಿರುದ್ಧ ನಾಳೆ ಕೊನೆ ಪಂದ್ಯ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋ ಬಟ್ಲರ್ ತ್ಯಜಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಫ್ಘಾನಿಸ್ತಾನ ವಿರುದ್ಧ ಸೋಲುಂಡ…

ಪಿಎಫ್ ಬಡ್ಡಿದರ ಶೇ.8.25ರಲ್ಲಿ ಯಥಾಸ್ಥಿತಿ ಉಳಿಸಿಕೊಳ್ಳಲು ನಿರ್ಧಾರ

ನವದೆಹಲಿ: ಭಾರತದ ನಿವೃತ್ತಿ ನಿಧಿ ಸಂಸ್ಥೆಯಾಗಿರುವ ಇಪಿಎಫ್‌ಒ 2024-25ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡಾ 8.25ರ ಮಟ್ಟದಲ್ಲಿಯೇ ಮುಂದುವರಿಸಲಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಪಿಎಫ್‌ಒ ಬಡ್ಡಿದರವನ್ನು ಶೇಕಡಾ 8.15ರಿಂದ 2023-24ಕ್ಕೆ ಶೇಕಡಾ 8.25ಕ್ಕೆ ಹೆಚ್ಚಿಸಿತ್ತು. ಇಪಿಎಫ್‌ಒನ ಉನ್ನತ ನೀತಿ ನಿರ್ಧಾರ ಸಮಿತಿ ಸೆಂಟ್ರಲ್ ಬೋರ್ಡ್…

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ರೈತರ ಕೃಷಿ ಪಂಪ್…

ಇಡ್ಲಿಯಿಂದ ಕ್ಯಾನ್ಸರ್, ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಹೊದಿಕೆ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ನಲ್ಲಿರುವ ರಾಸಾಯನಿಕಗಳು ದೇಹದಲ್ಲಿ ಸೇರುತ್ತವೆ. ಇದು ಸಾಯುವವರೆಗೂ ಮನುಷ್ಯರ…

ಉತ್ತರಾಖಂಡದಲ್ಲಿ ಭೀಕರ ಹಿಮಪಾತ: ಹಿಮದಡಿ ಸಿಲುಕಿದ 47 ಕಾರ್ಮಿಕರು

ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, 47 ಕಾರ್ಮಿಕರು ಸಿಲುಕಿರುವ ಭೀತಿ ಇದೆ. ಭಾರತ-ಟಿಬೆಟ್ ಗಡಿ ಭಾಗದಲ್ಲಿರುವ ಮಾನಾ ಗ್ರಾಮದ ಸೇನಾ ಶಿಬಿರದ ಬಳಿ ಹಿಮಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ನಡೆಸಿ 10 ಮಂದಿಯನ್ನು ರಕ್ಷಿಸಲಾಗಿದೆ. ಬದರೀನಾಥ ಜಲಾಶಯದಿಂದ ಕೇವಲ 3 ಕಿ.ಮೀ. ದೂರದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದಾಗ ರಸ್ತೆಯ ಮೇಲೆ…